ದಕ್ಷಿಣ ಭಾರತದ ಉದ್ಯಮಿಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿ ಸಿಗುತ್ತಿರುವುದು ವಿಶೇಷವಾದ ಸಂಗತಿಯಾಗಿದ್ದು , ಕೈಗಾರಿಕಾ ಕ್ಷೇತ್ರದಲ್ಲಿ ಚಂದ್ರಶೇಖರ್ ಅವರ ಸಾಧನೆ ಅಪಾರ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದದಿ ಇನ್ಸಿಟ್ಯೂಟ್ ಆಫ್ಇಂಡಿಯನ್ ಫೌಂಡ್ರಿಮೆನ್ ಸಂಘಟನೆ ರಾಷ್ಟ್ರೀಯ ಉಪಾಧ್ಯಕ್ಷ ಡಿ.ಎಸ್.ಚಂದ್ರಶೇಖರ್ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.ಮಾಚೇನಹಳ್ಳಿಯ ಶಾಂತಲಾ ಸ್ಟೇರೋಕಾಸ್ನಲ್ಲಿ ಉಪಾಧ್ಯಕ್ಷ ಆಗಿರುವ ಚಂದ್ರಶೇಖರ್ ಅವರು ದಶಕಗಳಿಂದ ಉದ್ಯಮಿಯಾಗಿ ಹಲವಾರು ಜನರಿಗೆ ಉದ್ಯೋಗ ನೀಡಿದ್ದಾರೆ ಎಂದು ತಿಳಿಸಿದರು .

0 Comments